
ಜಾಹಿರಾತು
ತಾಲೂಕಿನ ಬಬಲೇಶ್ವರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಕಾಮಗಾರಿಗೆ ಶಾಲೆಯ ವಿದ್ಯಾರ್ಥಿಗಳು ಭೂಮಿ ಪೂಜೆ ನೆರವೇರಿಸಿದರು.
ಸಿಂದಗಿ: ಜು.10ರಂದು ಗ್ರಾಮದಲ್ಲಿ ಸನ್ಮಾನ ಸಮಾರಂಭಕ್ಕೆ ಆಗಮಿಸಿದ ಸಂದರ್ಭ ಶಾಲಾ ಕಟ್ಟಡದ ಕಾಮಗಾರಿಯ ದುರಸ್ತಿ ಬಗ್ಗೆ ಶಾಲೆಯ ವಿದ್ಯಾರ್ಥಿನಿ ಸಂಧ್ಯಾ ಹಂಗರಗಿ ಮನವಿ ಮಾಡಿಕೊಂಡ ಹಿನ್ನಲೆ ಜು.30ರಂದು ಮಕ್ಕಳ ಕೈಯಿಂದಲೇ ಭೂಮಿ ಪೂಜೆ ಮಾಡಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ತಾಲೂಕಿನ ಬಬಲೇಶ್ವರ ಗ್ರಾಮದಲ್ಲಿ ಮಾತುಕೊಟ್ಟಂತೆ ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡದ ಕಾಮಗಾರಿಗೆ ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯ ಅಡಿಯಲ್ಲಿ 9ಲಕ್ಷ ರೂ. ಅನುದಾನ ಮಂಜೂರು ಮಾಡಿಸಿ ವಿದ್ಯಾರ್ಥಿ ಸಂಧ್ಯಾ ಹಂಗರಗಿ ಕಡೆಯಿಂದ ಭೂಮಿ ಪೂಜೆ ನೆರವೇರಿಸಲಾಯಿತು.
