Home Featured ವಿದ್ಯಾರ್ಥಿಗಳು ಓದಿನಲ್ಲಿ ನಿರಂತರತೆ ಇದ್ದರೆ ಮಾತ್ರ ಅಂದುಕೊಂಡ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ; ಡಾ.ಮಹೇಶ ಆರ್.ಮಡಿವಾಳರ

ವಿದ್ಯಾರ್ಥಿಗಳು ಓದಿನಲ್ಲಿ ನಿರಂತರತೆ ಇದ್ದರೆ ಮಾತ್ರ ಅಂದುಕೊಂಡ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ; ಡಾ.ಮಹೇಶ ಆರ್.ಮಡಿವಾಳರ

ಶ್ರೀ ಪದ್ಮಾರಾಜ ಮಹಿಳಾ ಪದವಿ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

by vegadhut@gmail.com.
0 comments

 ಪಟ್ಟಣದ ಶ್ರೀ ಪದ್ಮಾರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಶ್ರೀಪದ್ಮರಾಜ ಮಹಿಳಾ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭದ ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಿದ ವೈದ್ಯಾಧಿಕಾರಿ ಪ್ರಾ.ಆ.ಕೇಂದ್ರ ಮಡಕೇಶ್ವರ ಹಾಗೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ 482 ರ‍್ಯಾಂಕ್ ಪಡೆದ ಡಾ.ಮಹೇಶ ಆರ್.ಮಡಿವಾಳರ ಮಾತನಾಡಿದರ.

ಸಿಂದಗಿ: ವಿದ್ಯಾರ್ಥಿಗಳ ದಿಕ್ಕು ಬದಲಾವಣೆ ಮಾಡುವುದೇ ಪದವಿ. ಮನೆಯ ಜವಾಬ್ದಾರಿಯಲ್ಲಿ ಪುರುಷನಷ್ಟೇ ಪಾತ್ರ ಮಹಿಳೆಯದ್ದು ಆಗಿರುತ್ತದೆ. ಮಹಿಳೆ ಹೆಚ್ಚಿನ ಸವಾಲುಗಳನ್ನು ಎದುರಿಸಬೇಕಾದ ಪರಿಸ್ಥಿತಿಯಲ್ಲಿಯೇ ಸಾಧನೆ ಮಾಡಲೇಬೇಕು ಎಂದು ವೈದ್ಯಾಧಿಕಾರಿ ಪ್ರಾ.ಆ.ಕೇಂದ್ರ ಮಡಕೇಶ್ವರ ಹಾಗೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ 482 ರ‍್ಯಾಂಕ್ ಪಡೆದ ಡಾ.ಮಹೇಶ ಆರ್.ಮಡಿವಾಳರ ಹೇಳಿದರು.

 ಪಟ್ಟಣದ ಶ್ರೀ ಪದ್ಮಾರಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಶ್ರೀಪದ್ಮರಾಜ ಮಹಿಳಾ ಪದವಿ ಕಾಲೇಜು ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭದ ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಿ ಮಾತನಾಡಿದ ಅವರು, ನನ್ನ ಈ ಸಾಧನೆಯಲ್ಲಿ ನನ್ನ ಕುಟುಂಬ ಪಾತ್ರ ಹಿರಿದಾಗಿದೆ. ಅಸಮಾನತೆ, ಬಡತನ ಎವೆಲ್ಲವನ್ನು ಮೆಟ್ಟಿನಿಂತು ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ನಿರಂತರವಾಗಿ ಓದಿನಲ್ಲಿ ತೊಡಗಿಕೊಳ್ಳಬೇಕು. ಶಿಕ್ಷಣ. ಶಾಂತಿ, ಸತ್ಯ, ಅಹಿಂಸೆ ಮಾರ್ಗದಿಂದ ಮೊದಲು ಎಲ್ಲವನ್ನು ಪಾಲಿಸೋಣ. ವಿದ್ಯಾರ್ಥಿಗಳು ಓದಿನಲ್ಲಿ ನಿರಂತರತೆ ಇದ್ದರೆ ಮಾತ್ರ ಅಂದುಕೊಂಡ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳುತ್ತಾ ಮಹಾವಿದ್ಯಾಲಯದ ಆಯ್‌ಎಎಸ್/ಕೆಎಎಸ್ ಪರೀಕ್ಷೆಗೆ ಸಂಬಂಧಿಸಿ ಯಾವುದೇ ರೀತಿಯ ಸಲಹೆ ಅಥವಾ ಪ್ರಶ್ನೆಗಳಿದ್ದರೆ ಅದರ ಕುರಿತಾಗಿ ನಾನು ನಿಮಗೆ ಸಲಹೆ ನೀಡಿ ಮಾರ್ಗದರ್ಶನ ಮಾಡಲು ಸದಾ ಸಿದ್ದ ಎಂದರು.

 ಈ ವೇಳೆ ವಿಶೇಷ ಸನ್ಮಾನಿತರಾಗಿ ಆಗಮಿಸಿದ ಮಹಿಳಾ ಪಪೂ ಕಾಲೇಜ ನಿವೃತ್ತ ಪ್ರಾಚಾರ್ಯ ಎಂ.ಎಸ್.ಹೈಯಾಳಕರ ಮಾತನಾಡಿ, ಸಂಸ್ಥೆ ನೀಡುವ ಎಲ್ಲ ರೀತಿಯ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಮಹಿಳಾ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಮಟ್ಟದ ಶಿಕ್ಷಣವನ್ನು ಪಡೆದುಕೊಂಡು ಸಂಸ್ಥೆ ಮತ್ತು ಕಾಲೇಜಿನ ಕೀರ್ತಿ ಬೆಳಗಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

banner

ಈ ವೇಳೆ ಮಹಿಳಾ ವಿಶ್ವವಿದ್ಯಾಲಯಕ್ಕೆ ರ‍್ಯಾಂಕ್ ಬಂದ ಬಿಎಸ್‌ಡಬ್ಲೂö್ಯ ವಿಭಾಗದ ಐಶ್ವರ್ಯ ತಮದೊಡ್ಡಿ ಹಾಗೂ ವಿಶ್ವವಿದ್ಯಾಲಯದ ಖೋ-ಖೋ ತಂಡಕ್ಕೆ ಬ್ಲೂ ಆಗಿ ಆಯ್ಕೆಯಾದ ನಮ್ಮ ಮಾಹಾವಿದ್ಯಾಲಯದ ವಿದ್ಯಾರ್ಥಿನಿ ಸಿದ್ದಮ್ಮ ಬಿರಾದಾರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಚೇರಮನ್ನರು ಗುರುಕುಲ ಭಾಸ್ಕರ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪ್ರಾಚಾರ್ಯ ಎಸ್.ಎಂ. ಪೂಜಾರಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

 

ಇದೇ ಸಂದರ್ಭದಲ್ಲಿ ಪ್ರಾಚಾರ್ಯ ವಿ.ಡಿ.ಪಾಟೀಲ, ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ವಿ.ಪಿ.ನಂದಿಕೋಲ, ಜಿ.ಎಸ್.ಕುಲಕರ್ಣಿ, ಎ.ಆರ್.ರಜಪೂತ, ಯು.ಸಿಪೂಜೇರಿ, ಎಸ್.ಎನ್.ಕುಂದಗೋಳ, ಎನ್.ಬಿ.ಬಿರಾದಾರ, ಎಮ್.ಕೆ.ಬಿರಾದಾರ, ಬಿ.ಬಿ.ನಂದಿಮಠ, ಜಿ.ವಿ.ಪಾಟೀಲ, ಎಂ.ಎಂ.ಈಳಗೇರ, ಎಸ್.ಎಸ್.ದುದ್ದಗಿ, ಡಿ.ಎಂ.ಪಾಟೀಲ, ಸತೀಶ ಕಕ್ಕಸಗೇರಿ, ಹೇಮಾ ಕಾಸರ, ಶಂಕರ ಕುಂಬಾರ, ಮಮತಾ ಹರನಾಳ, ವಿಜಯಲಕ್ಷ್ಮೀ  ಭಜಂತ್ರಿ ಸೇರಿದಂತೆ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

  ಈ ವೇಳೆ ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಎಸ್.ಸಿ.ದುದ್ದಗಿ ವರದಿ ವಾಚಿಸಿದರು. ಉಪನ್ಯಾಸಕಿ ಹೇಮಾ ಹಿರೇಮಠ ಸ್ವಾಗತಿಸಿದರು. ವಿದ್ಯಾರ್ಥಿ ವಿಶಾಲಾಕ್ಷಿ ಬಿರಾದಾರ ಪ್ರಾರ್ಥಿಸಿದರು. ಮಧುಶ್ರೀ ಮತ್ತು ಸೀಮಾ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮೀನಾಜ ಗೋಲಗೇರಿ ವಂದಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news