RCB ಕೇರ್ಸ್ ಮೂರುತಿಂಗಳ ನಂತರ ತನ್ನ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬೇಸರ ದೊಂದಿಗೆ ಅಭಿಮಾನಿಗಳಿಗೆ ಭರವಸೆಯ ನುಡಿಗಳನ್ನಾಡಿದೆ.
ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ
ಎಲ್ಲವನ್ನೂ ಬದಲಾಯಿಸಿತು. ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ಧವಲ್ಲ, ಅದು ಶ್ರದ್ಧೆಯಿ೦ದ ತು೦ಬಿದ ಶಾಂತ ಶ್ರದ್ಧಾಂಜಲಿ.
ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ಧೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು.
ಅದರ ಫಲವೇ ಆರ್ಸಿಬಿ ಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ. ಇಂದು ನಾವು ಮರಳಿದ್ದೇವೆ; ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತ, ಕರ್ನಾಟಕದ ಹೆಮ್ಮೆಯಾಗಿ ಮು೦ದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.
ಆರ್ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ. ಹೆಚ್ಚಿನ ಮಾಹಿತಿ… ಶೀಘ್ರದಲ್ಲೇ ನೀಡಲಾಗುವುದೆಂದು ತಿಳಿಸಿದೆ.
@RCBTweets
https://x.com/RCBTweets/status/1960923232170819738?t=Dcv9o2Gc8wmvWXiyjgPh2w&s=19
