Home News ಗ್ರಾಮಗಳ ಅಭಿವೃದ್ಧಿಗೆ ಗಮನ : ಅಶೋಕ ಮನಗೂಳಿ

ಗ್ರಾಮಗಳ ಅಭಿವೃದ್ಧಿಗೆ ಗಮನ : ಅಶೋಕ ಮನಗೂಳಿ

by vegadhut@gmail.com.
0 comments

ಸಿಂದಗಿ : ಕ್ಷೇತ್ರದ ಅಭಿವೃದ್ಧಿಯನ್ನು ನಾನು ಬಯಸುತ್ತಿದ್ದೇನೆ. ಗ್ರಾಮಗಳು ಅಭಿವೃದ್ಧಿ ಆದಾಗ ಮಾತ್ರ ಭಾರತ ದೇಶ ಅಭಿವೃದ್ಧಿಯಾಗುವುದಕ್ಕೆ ಸಾಧ್ಯ ಆ ನಿಟ್ಟಿನಲ್ಲಿ ಮತಕ್ಷೇತ್ರದ ಹಳ್ಳಿಗಳ ಅಭಿವೃದ್ಧಿ ಕಡೆಗೆ ಹೆಚ್ಚು ಗಮಹರಿಸುತ್ತಿದ್ದೇನೆ ಎಂದು ಶಾಸಕ ಅಶೋಕ್ ಮನಗೂಳಿ ಮಾತನಾಡಿದರು.

        ಅವರು ತಾಲೂಕಿನ ಬಂಕಲಗಿ ಸಮೀಪದಲ್ಲಿ 2025-26 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಸಿಂದಗಿ ಮತಕ್ಷೇತ್ರದ ಸಿಂದಗಿಯಿಂದ ಬಂಕಲಗಿ ಗ್ರಾಮದ ವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಮಂಜುರಾದ 1 ಕೋಟಿ ರೂ ಮೊತ್ತದ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದೆ.

            ಬಂಕಲಗಿ ಗ್ರಾಮದಿಂದ ನಿತ್ಯ ನೂರಾರು ರೈತರು ಮತ್ತು ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮತ್ತು ಇನ್ನಿತರ ಕಾರ್ಯಗಳಿಗೆ ಸಿಂದಗಿಗೆ ಆಗಮಿಸುತ್ತಾರೆ. ಆದರೆ ಈ ರಸ್ತೆ ಹದಗೆಟ್ಟಿತ್ತು ಈ ಭಾಗದ ಅನೇಕ ವಿದ್ಯಾರ್ಥಿಗಳ ರೈತರ ಮತ್ತು ಸಾರ್ವಜನಿಕರ ಬೇಡಿಕೆಯೂ ಕೂಡ ಇದು ಆಗಿತ್ತು . ಈ ಕಾರಣಕ್ಕೆ ಗ್ರಾಮಸ್ಥರ ಮನವಿಯ ಮೇರೆಗೆ ಸುಮಾರು ಒಂದು ಕೋಟಿ ಅನುದಾನದಲ್ಲಿ ಉತ್ತಮ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದ ಅವರು, ಯಾವುದೇ ತಾರತಮ್ಯವಿಲ್ಲದೇ ಎಲ್ಲ ಗ್ರಾಮಗಳ ಅಭಿವೃದ್ಧಿ ಮಾಡುತ್ತೇನೆ. ಕ್ಷೇತ್ರವನ್ನು ತಲೆ ಎತ್ತಿ ನೋಡುವಂತೆ ಮಾಡುತ್ತೇನೆ ನನ್ನ ಕನಸಿಗೆ ಸಾರ್ವಜನಿಕರು ಮತ್ತು ಅಧಿಕಾರಿಗಳು ಸಹಕಾರ ಮುಖ್ಯವಾಗಿ ನೀಡಬೇಕು ಎಂದು ಮನವಿ ಮಾಡಿದರು.

ಇದೆ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಕೆಡಿಪಿ ಸದಸ್ಯ ಖಾದೀರ ಬಂಕಲಗಿ,ಗ್ಯಾರಂಟಿ ಸದಸ್ಯರಾದ ಸುನಂದಾ ಯಂಪುರ್, ರಜತ್ ತಾಂಬೆ, ಮೊಸೀನ್ ಬಿಳಗಿ, ಪರಸು ಉಪ್ಪಾರ್, ಶಂಕರಗೌಡ ಪಾಟೀಲ,ಮಾಳಪ್ಪ ಪೂಜಾರಿ ಪದ್ಮಮಗೌಡ ಬಿರಾದಾರ್,ಮಹಿಳಾ ಅಧ್ಯಕ್ಷ ಜಯಶ್ರೀ ಹದನೂರ, ವರ್ಷಾ ಪಾಟೀಲ್ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news