Home News ವಿಜಯಪುರ ಜಿಲ್ಲೆಗೆ ಇನ್ನು 500 ಕೋಟಿ ರೂ.ಘೋಷಿಸಲು  ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿಗಳಲ್ಲಿ ಮನವಿ

ವಿಜಯಪುರ ಜಿಲ್ಲೆಗೆ ಇನ್ನು 500 ಕೋಟಿ ರೂ.ಘೋಷಿಸಲು  ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿಗಳಲ್ಲಿ ಮನವಿ

by vegadhut@gmail.com.
0 comments
ವಿಜಯಪುರ :  ಜಿಲ್ಲೆಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸಾಕಷ್ಟು ಅನುದಾನ ನೀಡಿದ್ದು ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ತಿಳಿಸುವೆ ಎಂದು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.
ಸೆ.30ರಂದು ನಡೆದ ನಗರದ ಎನ್‌ಎಚ್-50 ಹತ್ತಿರದಲ್ಲಿನ ಎಸ್- ಹೈಪರ್ ಮಾರ್ಟ್ ಹತ್ತಿರದ ಶ್ರೀ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಷಾಲಿಸಿ ಆಸ್ಪತ್ರೆ ಉದ್ಘಾಟನೆ ಮತ್ತು ಮುಖ್ಯಮಂತ್ರಿಗಳಿಂದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಎಂದೂ ಕಾಣದ ಅಭಿವೃದ್ಧಿಯು ಈಗ ಕಾಣುತ್ತಿದೆ. ಮುಖ್ಯಮಂತ್ರಿಗಳಿಂದ ಅಂದಾಜು 450 ಕೋಟಿ ರೂ.ದಲ್ಲಿ ನಾನಾ ಅಭಿವೃದ್ಧಿ ಕೆಲಸಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿದೆ ಎಂದು ಸಂತಸ ವ್ಯಕ್ತಪಡಿಸಿದರು.

ವಿಜಯಪುರ ಜಿಲ್ಲೆಯು ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಇಲ್ಲದಿದ್ದರೂ ಸಹ ಇನ್ನು 6 ತಿಂಗಳಲ್ಲಿ ಸ್ಮಾರ್ಟ್ ಸಿಟಿಯಾಗಿ ಬದಲಾಗಲಿದೆ. ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಮತ್ತು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ದೂರದೃಷ್ಟಿಯಿಂದಾಗಿ ದೇಶ ಮತ್ತು ರಾಜ್ಯದಲ್ಲಿ ನಾನಾ ಬದಲಾವಣೆಗಳಾಗಿವೆ ಎಂದು ತಿಳಿಸಿದರು.
ವಿಜಯಪುರ ಜಿಲ್ಲೆಯಲ್ಲಿ 31 ಎಕರೆ ಪ್ರದೇಶದಲ್ಲಿ ಬಡವರಿಗೆ ಮನೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ ಶಾಸಕರು, ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ದಿ ನಿಟ್ಟಿನಲ್ಲಿ 500 ಕೋಟಿ ರೂ.ಗಳನ್ನು ನೀಡಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಶ್ರೀ ಸಿದ್ದೇಶ್ವರ ಸಂಸ್ಥೆ ಮತ್ತು ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಸ್ಥೆಗಳ ಮೂಲಕ ತಾವು ವಿಜಯಪುರ ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡುತ್ತಿರುವುದಾಗಿ ಭಾವುಕರಾಗಿ ನುಡಿದರು

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news